ಮುಚ್ಚಿ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯು ಒಂದಾಗಿದೆ, ಇದು ವಿಶ್ವದಾದ್ಯಂತ ವಷಕ್ಕೆ ೮ ದಶಲಕ್ಷಕ್ಕೂ ಹೆಚ್ಚೂ ಜನರನ್ನು ಕೊಲ್ಲುತ್ತಿದೆ ಹಾಗೂ ಪ್ರತ್ಯಕ್ಷ ಧೂಮಪಾನ ಮಾಡುವುದರಿಂದ ಸುಮಾರು ದಶಲಕ್ಷಗಳಷ್ಟು ಜನರು ಸಾವಿಗೀಡಾದರೆ ಧೂಮಪಾನ ಮಾಡದವರು ಪರೋಕ್ಷ ಧೂಮಪಾನಕ್ಕೆ ಬಲಿಯಾಗಿ 1.2 ದಶಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ ವಿಶ್ವಾದಾದ್ಯಂತ ಇರುವ 1.1 ಶತಕೋಟಿ ಧೂಮಪಾನಿಗಳಲ್ಲಿ ಸುಮಾರು 80% ರಷ್ಟು ಜನ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ತಂಬಾಕು ಸಂಬಂಧಿತ ಕಾಯಿಲೆ ಮತ್ತು ಸಾವಿನ ಪ್ರಮಾಣ ಹೆಚ್ಚಾಗಿದೆ ಮನೆಯ ದೈನಂದಿನ ಆಹಾರ ಮತ್ತು ಮೂಲಭೂತ ಅಗತ್ಯಗಳಿಗೆ ವೆಚ್ಚಗಳನ್ನುಮಾಡುವ ಬದಲಾಗಿ ತಂಬಾಕಿಗೆ ಖಚ್ಚು ಮಾಡುವ ಮೂಲಕ ತಂಬಾಕು ಬಳಕೆಯು ಬಡತನಕ್ಕೆ ಕಾರಣವಾಗಿದೆ. ಭಾರತ ಸರಕಾರ 2007-08ರಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾ‍ರ್ಯಕ್ರಮವನ್ನು (ಎನ್‌.ಟಿ.ಸಿ.ಪಿ) ಪ್ರಾರಂಬಿಸಿತು. ವಿ‍ಶ್ವ ವಯಸ್ಕರ ತಂಬಾಕು ಸಮೀಕ್ಷೆ (ಜಿ.ಎ.ಟಿ.ಎಸ್‌) 2009-10ರಂತೆ ತಂಬಾಕು ಬಳಕೆಯ ಪ್ರಮಾಣಯನ್ನು ಸೂಚಿಸುತ್ತದೆ. 12ನೇ ಪಂಚವಾರ್ಷಿಕ ಯೋಜನೆಯ ಅಂತ್ಯದ ವೇಳೆಗೆ ತಂಬಾಕು ಬಳಕೆಯನ್ನು 5% ರಷ್ಟು ಕಡಿಮೆ ಮಾಡುವ ಗುರಿಯನ್ನು 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಹಾಕಿಕೊಳ್ಳಲಾಗಿತ್ತು. ಜಿ.ಎ.ಟಿ.ಎಸ್‌ 2ನೇ ಸಮೀಕ್ಷೆಯ ಪ್ರಕಾರ ತಂಬಾಕು ಬಳಸುವವರ ಸಂಖ್ಯೆ ಸುಮಾರು 81 ಲಕ್ಷ [8.1 ದಶ ಲಕ್ಷ] ಕಡಿಮೆಯಾಗಿದೆ. ಕರ್ನಾಟಕದ ಎಲ್ಲಾ 30 ಜಿಲ್ಲೆಗಳಲ್ಲಿ ಎನ್.ಟಿ.ಸಿ.ಪಿ ಯನ್ನು ಜಾರಿಗೆ ತರಲಾಗಿದೆ. 2015-16ನೇ ಸಾಲಿನಲ್ಲಿ ಎನ್.ಟಿ.ಸಿ.ಪಿಯನ್ನು ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರುವಮುಖಾಂತರ 2015-16ನೇ ಸಾಲಿನಿಂದಲೂ ಕೊಪ್ಪಳ ಜಿಲ್ಲೆಯಲ್ಲಿ ರಾ.ತ.ನಿ.ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು

1. ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು.

2. ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು.

3. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು.

4. ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು.

5. ತಂಬಾಕು ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ವಿಶ್ವ ಆಯೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿಯ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡುವುದು.

ಎನ್.ಟಿ.ಸಿ.ಪಿಯ ರಚನೆ

NTCP Structure

ಭಾತರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿಯಂತ್ರಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶವನ್ನು ರಚಿಸಲಾಗಿದೆ. ನೀತಿ ರೂಪಿಸುವಿಕೆ, ಯೋಜನೆ ತಯಾರಿ ಮತ್ತು ತಂಬಾಕು ನಿಯಂತ್ರಣ ಕಾರ್ಯಕ್ರಮದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಇದರ ಜವಾಬ್ದಾರಿಯಾಗಿರುತ್ತದೆ. ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಜಂಟಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದೆ

ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು

• ಸಾರ್ವಜನಿಕ ಜಾಗೃತಿ, ಸಮೂಹ ಮಾಧ್ಯಮ ಜಾಗೃತಿ ಅಭಿಯಾನ ಮತ್ತು ಸಾಮಾಜಿಕ ವರ್ತನೆ ಬದಲಾವಣೆಗೆ ಅಗತ್ಯ ‍ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

• ರಾಷ್ಟ್ರಮಟ್ಟದಲ್ಲಿ ತಂಬಾಕು ಉತ್ಪನ್ನಗಳ ಪರೀಕ್ಷೆಯ ಪ್ರಯೋಗಾಲಯಗಳನ್ನು ಸ್ಥಾಪಿಸಿ ನಿರ್ವಹಣೆ ಮಾಡುವುದು.

• ಇತರೆ ನೋಡಲ್ ಇಲಾಖೆಗಳ ಸಮನ್ವಯದೊಂದಿಗೆ ಪರ್ಯಾಯ ಬೆಳೆಗಳು, ಜೀವನೋಪಾಯಕ್ಕೆ ಅಗತ್ಯವಿರುವ ಸಂಶೋದನೆ ಹಾಗೂ ತರಬೇತಿಗಳನ್ನು ಆಯೋಜಿಸುವುದು.

• ಕಣ್ಗಾವಲು ಸೇರಿದಂತೆ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ನಡೆಸುವುದು.

• ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆರೋಗ್ಯ ಸೇವೆ ನೀಡುವಲ್ಲಿ ಒಂದು ಭಾಗವಾಗಿ ಕಾರ್ಯನಿರ್ವಹಿಸುವುದು.

ರಾಜ್ಯ ಮಟ್ಟದಲ್ಲಿ

• ರಾಜ್ಯ ಮಟ್ಟದಲ್ಲಿ ತಂಬಾಕು ನಿಯಂತ್ರಣ ಮಾಡಲು ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮೇಲ್ವಿಚಾರಣೆ ಮಾಡುವುದು.

• ರಾಜ್ಯ ಮಟ್ಟದಲ್ಲಿ ಅಡ್ವಕೆಸಿ ಕಾರ್ಯಾಗಾರಗಳನ್ನು ಆಯೋಜಿಸುವುದು.

• ಜಿಲ್ಲಾ ಮಟ್ಟದಲ್ಲಿ ಎನ್.ಟಿ.ಸಿ.ಪಿ ರ್ಯಕ್ರಮದ ಅಡಿಯಲ್ಲಿ ನೇಮಕಗೊಂಡು ಕರ್ತವ್ಯ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿಗಳನ್ನು ಆಯೋಜಿಸುವುದು.

• ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪುನರ್ ಮನನ ತರಬೇತಿಗಳನ್ನು ಆಯೋಜಿಸುವುದು.

• ತಂಬಾಕು ವ್ಯಸನ ಬಿಡಿಸಲು ವ್ಯಸನ ಮುಕ್ತ ಕೇಂದ್ರಗಳಲ್ಲಿ ಕರ್ತವ್ಯ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ವೃತ್ತಿಪರರಿಗೆ ಹಾಗೂ ಆರೋಗ್ಯ ಸೇವಾ ಕಾರ್ಯಕರ್ತರಿಗೆ ತರಬೇತಿ ನೀಡುವುದು.

• ಕೋಟ್ಪಾ ಕಾಯ್ದೆಯ ಅನುಷ್ಠಾನ ಮಾಡುವುದು ಕಾನೂನು ಜಾರಿ ಅಧಿಕಾರಿಗಳಿಗೆ ಕಾನೂನು ತರಬೇತಿಗಳನ್ನು ಆಯೋಜಿಸುವುದು.

ಜಿಲ್ಲಾ ಮಟ್ಟದಲ್ಲಿ

• ಕಾನೂನು ಜಾರಿ ಅಧಿಕಾರಿಗಳಿಗೆ ಶಾಲಾ ಶಿಕ್ಷಕರಿಗೆ ಕಾಲೇಜು ಉಪನ್ಯಾಸಕರಿಗೆ ಸಾಮಾಜಿಕ ಕಾರ್ಯಕರ್ತರು ಸರಕಾರೇತರ ಸಂಸ್ಥೆಗಳ ಪ್ರತಿ ನಿಧಿಗಳಿಗೆ ಮತ್ತು ಪಂಚಾಯ್ತಿ ಮಟ್ಟದ ಅಧಿಕಾರಿಗಳಿಗೆ ತರಬೇತಿಗಳನ್ನು ಆಯೋಜಿಸುವುದು.

• ಮಾಹಿತಿ ಶಿಕ್ಷಣ ಸಂವಹನ (ಐ.ಇ.ಸಿ) ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡುಸುವುದು.

• ಶಾಲಾ/ಕಾಲೇಜು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹದಿಹರೆಯದ ವಯಸ್ಸಿನವರು ತಂಬಾಕು ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು.

• ನಗರ ಸ್ಥಳೀಯ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವುದು.

• ಪೊಲೀಸ್ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕೋಟ್ಪಾ ಕಾಯ್ದೆಯ ಉಲ್ಲಂಘನೆಗಳನ್ನು ಪತ್ತೆಮಾಡಿ ಉಲ್ಲಂಘನೆ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸುವುದು.

ಕೊಪ್ಪಳ ಜಿಲ್ಲೆಯಲ್ಲಿ ಆಯೋಜಿಸಿರುವ ವಿನೂತನ ಕಾರ್ಯಕ್ರಮವು ಗುಲಾಬಿ ಆಂದೋಲನ:- ದೂಮಪಾನ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೋಟ್ಪಾ ಕಾಯ್ದೆಯನ್ನು ಉಲ್ಲಂಘನೆ ಮಾಡದಂತೆ ಸಾರ್ವಜನಿಕರಿಗೆ ಗುಲಾಬಿ ಹೂ ಮತ್ತು ಕರಪತ್ರವನ್ನು ನೀಡಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಮನವರಿಕೆ ಮಾಡುವುದೇ ಗುಲಾಬಿ ಆಂದೋಲನದ ಕಾರ್ಯತಂತ್ರವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ಮತ್ತು ಸೇವೆಗಳನ್ನು ಪಡೆಯಲು ಸಂಪರ್ಕಿಸಿರಿ

ಕ್ರಮ ಸಂಖ್ಯೆ ಹುದ್ದೆ ವಿಳಾಸ
1 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ, ಜಿಲ್ಲಾ ಆಡಳಿತ ಭವನ ಕೊಪ್ಪಳ.
2 ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಜಿಲ್ಲಾ ಸರ್ವೇಕ್ಷಣಾ ಘಟಕ ಹಳೇ ಜಿಲ್ಲಾ ಆಸ್ಪತ್ರೆ ಆವರಣ, ಕೊಪ್ಪಳ -583231  ದೂರವಾಣಿ- 08539-230119
ಇ-ಮೇಲ್ : dsokoppal-hfws[at]karnataka[dot]gov[dot]in
3 ಜಿಲ್ಲಾ ಸಲಹೆಗಾರರು
4 ಸಾಮಾಜಿಕ ಕಾರ್ಯಕರ್ತರು
5 ಆಪ್ತ ಸಮಾಲೋಚಕರು
6 ದತ್ತಾಂಶ ನಿರ್ವಾಹಕರು

ಇತರ ಲಿಂಕ್‌ಗಳು: